ಬೆಕ್ಕನ್ನು ಕಂಬಕ್ಕೆ ಕಟ್ಟಿ ಹಾಕುವುದರ ಧಾರ್ಮಿಕ ಮಹತ್ವ : ಝೆನ್ ಕಥೆ

black-cat-mariusz-szmerdtಒಂದು ಆಶ್ರಮದಲ್ಲಿ, ಪ್ರತೀ ಸಂಜೆ ಅಧ್ಯಾತ್ಮಿಕ ಗುರುಗಳು ತಮ್ಮ ಶಿಷ್ಯರೊಂದಿಗೆ ಧ್ಯಾನಕ್ಕೆ ಕೂರುತ್ತಿದ್ದಂತೆಯೇ, ಅವರೇ ಸಾಕಿಕೊಂಡಿದ್ದ ಬೆಕ್ಕೊಂದು ತುಂಬಾ ಸದ್ದು ಮಾಡುತ್ತಾ, ಓಡಾಡುತ್ತ, ಧ್ಯಾನಕ್ಕೆ ಅಡಚಣಿ ಉಂಟು ಮಾಡುತ್ತಿತ್ತು.
ಇದರಿಂದ ಬೇಸತ್ತ ಗುರುಗಳು ಆ ಬೆಕ್ಕನ್ನು ಹೊರಗೆ ಕಂಬಕ್ಕೆ ಕಟ್ಟಿ ಹಾಕುವಂತೆ ಶಿಷ್ಯರಿಗೆ ಆಜ್ಞಾಪಿಸಿದರು.

ಆನಂತರ ಪ್ರತೀ ಸಂಜೆ ಧ್ಯಾನದ ಸಮಯಕ್ಕೆ ಸರಿಯಾಗಿ ಬೆಕ್ಕನ್ನು ಹೊರಗೆ ಕಂಬಕ್ಕೆ ಕಟ್ಟಿ ಹಾಕಲಾಗುತ್ತಿತ್ತು.
ಕೆಲ ವರ್ಷಗಳಾದ ಮೇಲೆ ಗುರುಗಳು ತೀರಿ ಹೋದರು. ಆದರೂ ಬೆಕ್ಕನ್ನು ಪ್ರತೀ ಸಂಜೆ ಕಟ್ಟಿ ಹಾಕುವ ಪರಿಪಾಠ ಮುಂದುವರೆಯಿತು.

ಕೊನೆಗೊಮ್ಮೆ ಬೆಕ್ಕೂ ತೀರಿಕೊಂಡಿತು. ಆಮೇಲಿಂದ ಶಿಷ್ಯರು ಇನ್ನೊಂದು ಬೆಕ್ಕನ್ನು ತಂದು ಪ್ರತೀ ಸಂಜೆ ಧ್ಯಾನದ ಸಮಯಕ್ಕೆ ಕಂಬಕ್ಕೆ ಕಟ್ಟಿ ಹಾಕತೊಡಗಿದರು.

ಕೆಲ ಶತಮಾನಗಳ ನಂತರ, ಆ ಆಶ್ರಮದ ಮುಂದಿನ ಪೀಳಿಗೆಯ ವಿದ್ವಾಂಸರು ಧ್ಯಾನ ಮಾಡುವಾಗ ಬೆಕ್ಕನ್ನು ಕಂಬಕ್ಕೆ ಕಟ್ಟಿ ಹಾಕುವ ಸಂಪ್ರದಾಯದ ಧಾರ್ಮಿಕ ಮಹತ್ವದ ಬಗ್ಗೆ ಧರ್ಮಶಾಸ್ತ್ರಗಳನ್ನು ರಚಿಸಿದರು.

ಸಂಗ್ರಹ ಮತ್ತು ಅನುವಾದ: ಚಿದಂಬರ ನರೇಂದ್ರ

 

Unknown's avatar

About ಅರಳಿ ಮರ

ಆಧ್ಯಾತ್ಮ, ವ್ಯಕ್ತಿತ್ವ ವಿಕಸನ ಮತ್ತು ಜೀವನ ಶೈಲಿ

Leave a Reply

This site uses Akismet to reduce spam. Learn how your comment data is processed.