ಉಪಾಧಿಗಳಿಂದ ಮುಕ್ತಿ ~ ಝೆನ್ ಕಥೆ

ಕ್ಯೋಟೋ ರಾಜ್ಯಪಾಲನೊಬ್ಬನಿಗೆ ಒಮ್ಮೆ ಝೆನ್ ಮಹಾಗುರು ಕೆಯಿಚುವನ್ನು ಭೇಟಿ ಮಾಡುವ ಮನಸ್ಸಾಯಿತು. ತೊಫುಕು ದೇವಾಲಯದಲ್ಲಿ ಉಪದೇಶ ಮಾಡುತ್ತಿದ್ದ ಕೆಯಿಚುವಿಗೆ ಆತ ಹೊರಗಿನಿಂದ ತನ್ನ ಗುರುತಿನ ಚೀಟಿ ಕಳಿಸಿದ. ಅದರಲ್ಲಿ ಹೀಗೆ ಬರೆದಿತ್ತು; ಕಿಟಾಗಕಿ, ಕ್ಯೋಟೋ ರಾಜ್ಯಪಾಲ.

ಅದನ್ನೋದಿದ ಕೆಯಿಚು, “ಇವರೊಂದಿಗೆ ನನಗೇನು ಕೆಲಸ? ನಾನು ಇವರನ್ನ ಭೇಟಿಯಾಗೋದಿಲ್ಲ” ಎಂದು ಚೀಟಿಯನ್ನು ವಾಪಸು ಕಳಿಸಿಬಿಟ್ಟ.

ಸೇವಕ ತಲೆ ತಗ್ಗಿಸಿ ನಿಂತು ರಾಜ್ಯಪಾಲನಿಗೆ ವರದಿ ಒಪ್ಪಿಸಿದ. ಈಗ ಆತ ಚೀಟಿ ತೆಗೆದುಕೊಂಡು ‘ಕ್ಯೋಟೋ ರಾಜ್ಯಪಾಲ’ ಎನ್ನುವ ಪದಗಳಿಗೆ ಕಾಟು ಹಾಕಿ ಮತ್ತೆ ಕಳಿಸಿಕೊಟ್ಟ.

ಸೇವಕ ನೀಡಿದ ಚೀಟಿಯನ್ನು ನೋಡಿದ ಮಹಾಗುರು, “ಓ, ನಾನು ಕಿಟಾಗಕಿಯೊಂದಿಗೆ ಮಾತನಾಡೋದಿದೆ. ಅವರನ್ನ ಬರಹೇಳು” ಅಂದ!

ಸಂಗ್ರಹ ಮತ್ತು ಅನುವಾದ : ಅಲಾವಿಕಾ

Unknown's avatar

About ಅರಳಿ ಮರ

ಆಧ್ಯಾತ್ಮ, ವ್ಯಕ್ತಿತ್ವ ವಿಕಸನ ಮತ್ತು ಜೀವನ ಶೈಲಿ

Leave a Reply

This site uses Akismet to reduce spam. Learn how your comment data is processed.