ಕರಡಿ ಬೇಟೆಗೆ ಹೋದ ಮುಲ್ಲಾ ನಸ್ರುದ್ದೀನ್ ! : Tea time story

ಮುಲ್ಲಾ ನಸ್ರುದ್ದೀನನಿಗೆ ಕರಡಿಗಳೆಂದರೆ ಭಾರಿ ಭಯ. ಒಂದು ದಿನ ರಾಜ್ಯದ ಸುಲ್ತಾನ ಕರಡಿ ಬೇಟೆಗೆ ತನ್ನೊಡನೆ ಬರುವಂತೆ ನಸ್ರುದ್ದೀನ ನನ್ನು ಆಹ್ವಾನಿಸಿದ.

ತನ್ನ ಕರಡಿಗಳ ಕುರುತಾದ ಭಯವನ್ನು ಸುಲ್ತಾನನಿಗೆ ಹೇಗೆ ಹೇಳುವುದು ಎಂದು ಗೊತ್ತಾಗದೆ, ನಸ್ರುದ್ದೀನ್ ಹೆದರಿಕೆಯಿಂದಲೇ ಸುಲ್ತಾನನಿಗೆ ಒಪ್ಪಿಗೆ ಕೊಟ್ಟುಬಿಟ್ಟ.

ಬೇಟೆ ಮುಗಿಸಿ ಹಿಂತಿರುಗಿದ ನಸ್ರುದ್ದೀನ ನನ್ನು ಅವನ ಗೆಳೆಯ ಪ್ರಶ್ನೆ ಮಾಡಿದ, “ ಹೇಗಿತ್ತು ಕರಡಿ ಬೇಟೆ? “

“ ಅದ್ಭುತವಾಗಿತ್ತು“ ನಸ್ರುದ್ದೀನ್ ಉತ್ತರಿಸಿದ.

“ ಹೌದಾ, ಎಷ್ಟು ಕರಡಿಗಳು ಸಿಕ್ಕವು?” ಗೆಳೆಯ ತಿರುಗಿ ಪ್ರಶ್ನೆ ಮಾಡಿದ.

“ ಒಂದೂ ಇಲ್ಲ”  ಉತ್ತರಿಸಿದ ನಸ್ರುದ್ದೀನ.

“ ಮತ್ತೆ ಯಾಕೆ ಹೇಳಿದೆ? ಬೇಟೆ ಅದ್ಭುತವಾಗಿತ್ತು ಅಂತ?” ಗೆಳೆಯನ ಪ್ರಶ್ನೆ.

“ ಕರಡಿಗಳನ್ನು ಕಂಡರೆ ಹೆದರಿ ಸಾಯುವವನಿಗೆ ಒಂದು ಕರಡಿಯೂ ಕಾಣಿಸಲಿಲ್ಲವೆಂದರೆ , ಅದು ಅವನಿಗೆ ಅದ್ಭುತವೇ ಅಲ್ವ?” ಮುಲ್ಲಾ ನಗುತ್ತ ಉತ್ತರಿಸಿದ.

Unknown's avatar

About ಅರಳಿ ಮರ

ಆಧ್ಯಾತ್ಮ, ವ್ಯಕ್ತಿತ್ವ ವಿಕಸನ ಮತ್ತು ಜೀವನ ಶೈಲಿ

2 Responses

Leave a Reply

This site uses Akismet to reduce spam. Learn how your comment data is processed.