ಮೂಲ : ಶಮ್ಸ್ ಎ ತಬ್ರೀಝ್ | ಕನ್ನಡಕ್ಕೆ : ಚಿದಂಬರ ನರೇಂದ್ರ
ಸತ್ಯದ ಹಾದಿಯ ಮೇಲೆ
ನಮ್ಮನ್ನು ಕೈ ಹಿಡಿದು ಮುನ್ನಡೆಸುವುದು
ಹೃದಯವೇ ಹೊರತು
ಬುದ್ಧಿಯಲ್ಲ.
ಈ ಪ್ರಯಾಣದಲ್ಲಿ ಹೃದಯ
ನಿಮ್ಮ ಪ್ರಧಾನ ಮಾರ್ಗದರ್ಶಿಯಾಗಿರಲಿ.
‘ಅಹಂ’ ತಕರಾರು ಮಾಡಿದರೆ
ಮುಟ್ಟಿ ಮಾತನಾಡಿಸಿ, ಒಪ್ಪಿಸಿ
ಸಾಧ್ಯವಾಗದಿದ್ದರೆ ಸವಾಲು ಹಾಕಿ
ಭೀಕರ ಯುದ್ಧವಾದರೂ ಚಿಂತೆಯಲ್ಲ
ಹೃದಯ, ನಿಮ್ಮ ಸುಳ್ಳು ಅಹಂ ಮೇಲೆ
ವಿಜಯ ಸಾಧಿಸಲಿ.
ನಿಮ್ಮೊಳಗಿನ
‘ಅಹಂ’ ನ ಎಳೆಗಳನ್ನು ಸ್ಪಷ್ಟವಾಗಿ
ಗುರುತಿಸಬಲ್ಲಿರಾದರೆ,
ಸತ್ಯದ ಹಾದಿಯಲ್ಲಿನ ದೊಡ್ಡ ಆತಂಕವೊಂದನ್ನು
ಯಶಸ್ವಿಯಾಗಿ ನಿಭಾಯಿಸಿದಂತೆ.
25ನೇ ನಿಯಮ ಇಲ್ಲಿ ನೋಡಿ: https://aralimara.com/2020/01/25/sufi-76/
1 Comment