ಭಗವದ್ಗೀತೆಯ ಬಗ್ಗೆ ಸರಳ ಮಾಹಿತಿ ಇಲ್ಲಿದೆ. ಹಿಂದಿನ ಭಾಗ ಇಲ್ಲಿ ನೋಡಿ: https://aralimara.com/2023/02/16/geete-16/
ಹಿಂದಿನ ಸಂಚಿಕೆಯಲ್ಲಿ 1 ಮತ್ತು 2 ನೇ ಅಧ್ಯಾಯಗಳ ಸಾರಾಂಶ ನೋಡಿದ್ದಿರಿ. ಮುಂದಿನದ್ದು ಇಲ್ಲಿದೆ…
• ಜ್ಞಾನಮಾರ್ಗ ಮತ್ತು ಕರ್ಮಮಾರ್ಗದ ಬಗ್ಗೆ ಪ್ರಸ್ತಾಪಿಸುವ ಕೃಷ್ಣ, ಆ ನಂತರ ಕರ್ಮಯೋಗದ ವಿಸ್ತಾರವನ್ನು ತಿಳಿಸುತ್ತಾನೆ. ನಾಲ್ಕನೇ ಅಧ್ಯಾಯದಲ್ಲಿ ಜ್ಞಾನದ ಆಯಾಮ ಮತ್ತು ಕರ್ಮದ ಪ್ರಭೇದಗಳನ್ನು ವಿವರಿಸುತ್ತಾನೆ. ಹಿಂದೆ ಹೇಳಿದ ಜ್ಞಾನಯೋಗ ಮತ್ತು ಕರ್ಮಯೋಗವನ್ನೇ ವಿಸ್ತರಿಸಿ ಜ್ಞಾನದ ಮಹತ್ವ ಮತ್ತು ಕರ್ಮದ ಪ್ರಭೇದಗಳ ಜೊತೆಗೆ ಈ ಎರಡು ಮಾರ್ಗದಿಂದ ನಾವು ಆತ್ಯಂತಿಕವಾಗಿ ಪಡೆಯುವಂಥ ಫಲದ ಬಗ್ಗೆ ಕೃಷ್ಣ ವಿವರಿಸುವುದನ್ನು ಈ ಅಧ್ಯಾಯದಲ್ಲಿ ಕಾಣಬಹುದು.
ಸೃಷ್ಟಿಯ ಆದಿಯಿಂದ ಈ ಜ್ಞಾನದ ಪರಂಪರೆ ಹೇಗೆ ಬೆಳೆದು ಬಂತು ಎನ್ನುವ ಚಿತ್ರಣವನ್ನು ನಾಲ್ಕನೇ ಅಧ್ಯಾಯದಲ್ಲಿ ಕೃಷ್ಣ ನಿರೂಪಿಸುತ್ತಾನೆ. ಜ್ಞಾನ ಎನ್ನುವುದು ಅನಾಧಿನಿತ್ಯ. ಇದು ಅಳಿವಿರದ ವಿದ್ಯೆ. ಪ್ರತೀ ಸೃಷ್ಟಿಯ ಆದಿಯಲ್ಲೂ ಈ ವಿದ್ಯೆ ಭಗವಂತನಿAದ ಹೇಳಲ್ಪಡುತ್ತದೆ. ನಂತರ ದೇವತೆಗಳು, ದೇವತೆಗಳಿಂದ ರಾಜರ್ಷಿಗಳು, ನಂತರ ಋಷಿಗಳು ಹೀಗೆ ಜ್ಞಾನ ಪರಂಪರೆ ಬೆಳೆಯುತ್ತದೆ. ಇಂದು ಈ ರೀತಿ ಹರಿದು ಬಂದ ವಿದ್ಯೆ ಕಣ್ಮರೆಯಾಗುತ್ತಿದೆ; ಜನ ಮರೆಯುತ್ತಿದ್ದಾರೆ. ಅರ್ಜುನನೂ ಈ ವಿಸ್ಮöÈತಿಗೆ ಒಳಗಾದವರಲ್ಲಿ ಒಬ್ಬ. ಆದರೆ ವಾಸ್ತವದಲ್ಲಿ ಜ್ಞಾನ ನಾಶವಾಗಿಲ್ಲ, ಆದರೆ ಮೋಹದ ಪರದೆ ಅದನ್ನು ತಡೆದಿದೆ. ಆದ್ದರಿಂದ ನಿನಗೆ ನಾನು ಈಗ ಆ ಜ್ಞಾನವನ್ನು ಪುನಃ ಹೇಳುತ್ತಿದ್ದೇನೆ ಎನ್ನುತ್ತಾನೆ ಕೃಷ್ಣ. ಅರ್ಜುನ ಕೃಷ್ಣನ ಮೇಲಿಟ್ಟಿರುವ ಅಪಾರ ಗೌರವ, ಭಕ್ತಿ ಹಾಗು ಆತ್ಮೀಯತೆಯನ್ನು ಗುರುತಿಸಿ, ಅನಾದಿನಿತ್ಯವಾದ, ಅಪೂರ್ವವಾದ ಈ ಜ್ಞಾನವನ್ನು ಕೃಷ್ಣ ಅರ್ಜುನನಿಗೆ ನೆನಪಿಸುತ್ತಿದ್ದಾನೆ. ಈ ಅಧ್ಯಾಯ ಈ ಪ್ರಕ್ರಿಯೆಗೆ ಮೀಸಲಾಗಿದೆ.
• ಕರ್ಮಯೋಗದ ಬಗ್ಗೆ ನಾಲ್ಕನೇ ಅಧ್ಯಾಯದಲ್ಲಿ ಹೇಳುವ ಕೃಷ್ಣ, ಕೊನೆಯಲ್ಲಿ ಕರ್ಮಸನ್ಯಾಸದ ಬಗ್ಗೆಯೂ ಹೇಳುತ್ತಾನೆ. ಶಾಸ್ತಿçÃಯವಾಗಿ ಕರ್ಮಸನ್ಯಾಸ ಎಂದರೆ ದ್ವಂದ್ವಾತೀತವಾಗಿ, ಕರ್ಮಫಲದ ಬಯಕೆಯಿಲ್ಲದೆ-ಕರ್ಮ ಮಾಡುವುದು. ಇಲ್ಲಿ ರಾಗ-ದ್ವೇಷಗಳಿಗೆ, ಕಾಮ-ಕ್ರೋಧಗಳಿಗೆ ಎಡೆಯಿಲ್ಲ. ಈ ಬಗ್ಗೆಯೂ ವಿಶೇಷವಾಗಿ ಕೃಷ್ಣ ಹಿಂದೆ ವಿವರಿಸಿದ್ದ. ಆದ್ದರಿಂದ ಕರ್ಮಸನ್ಯಾಸ ಎಂದರೆ ಕರ್ಮವನ್ನು ಬಿಡುವುದಲ್ಲ, ಕರ್ಮದಲ್ಲಿ ಕಾಮ ಕ್ರೋಧಗಳನ್ನು ಬಿಡುವುದು. ಆದರೆ ಕಾಮ-ಕ್ರೋಧಗಳ ಅತೀತನಾಗಿ ಜ್ಞಾನಮಾರ್ಗದಲ್ಲಿ ಯುದ್ಧ ಮಾಡುವುದು ಹೇಗೆ? ಇದನ್ನು ಅರ್ಥ ಮಾಡಿಕೊಳ್ಳುವುದು ಸ್ವಲ್ಪ ಕಷ್ಟ. ಈ ಕುರಿತು ಕೃಷ್ಣನಲ್ಲಿ ಅರ್ಜುನ ವಿವರಣೆಯನ್ನು ಕೇಳುತ್ತಾನೆ. ಇದರೊಂದಿಗೆ ಐದನೇ ಅಧ್ಯಾಯ ಆರಂಭವಾಗುತ್ತದೆ.